Q & A for Students – September 2024

Q1: ನಾನು ಪಿಯುಸಿ ಮುಗಿಸಿದ್ದು, ಈಗ ಎಂಜಿನಿಯರಿಂಗ್ (ಕಂಪ್ಯೂಟರ್ ವಿಜ್ಞಾನ) ಮತ್ತು ಎಂಬಿಬಿಎಸ್ ಎರಡರಲ್ಲೂ ಸರ್ಕಾರಿ ಸೀಟ್ ಸಿಗುವ ಸಾಧ್ಯತೆಯಿದೆ. ಆದರೆ, ಇವೆರಡರ ಆಯ್ಕೆಯಲ್ಲಿ ಗೊಂದಲವಿದ್ದು ಮಾರ್ಗದರ್ಶನದ ಅಗತ್ಯವಿದೆ.

ನೀವು ಕೇಳಿರುವ ಎರಡೂ ಆಯ್ಕೆಗಳು ಉತ್ತಮವಾದದ್ದಾದರೂ, ನಿಮಗೆ ಯಾವುದು ಹೆಚ್ಚು ಸೂಕ್ತವೆಂದು ಮೌಲ್ಯಮಾಪನ ಮಾಡಬೇಕು. ವೈದ್ಯರಾಗಲು ಸೇವಾ ಮನೋಭಾವ, ಜ್ಞಾಪಕ ಶಕ್ತಿ, ನಿಷ್ಠೆ, ಪ್ರಾಮಾಣಿಕತೆ, ಸಮಯದ ನಿರ್ವಹಣೆ, ವೃತ್ತಿ ಮತ್ತು ವೈಯಕ್ತಿಕ ಬದುಕಿನ ಸಮತೋಲನ ಅಗತ್ಯವಾದರೆ, ಎಂಜಿನಿಯರಿAಗ್ ವೃತ್ತಿಗೆ ಗಣಿತದಲ್ಲಿ ತಜ್ಞತೆ, ವಿಶ್ಲೇಷಾತ್ಮಕ ಕೌಶಲ, ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲ ಅಗತ್ಯವಾಗುತ್ತದೆ. ಹಾಗಾಗಿ, ನಿಮ್ಮ  ಸ್ವಾಭಾವಿಕ ಪ್ರತಿಭೆ, ಆಸಕ್ತಿ, ಒಲವು ಮತ್ತು ಕೌಶಲಗಳ ಮೌಲ್ಯಮಾಪನ ಮಾಡಿ, ವೈಯಕ್ತಿಕ/ಕುಟುಂಬದ ಮೌಲ್ಯಗಳು, ಸವಾಲುಗಳು, ಅಗತ್ಯಗಳು, ಧ್ಯೇಯಗಳನ್ನು ಗುರುತಿಸಿ, ವೃತ್ತಿಯ ಆಯ್ಕೆಯನ್ನು ಮಾಡುವುದು ಸೂಕ್ತ. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ

Q2: ನಾನೀಗ ದ್ವಿತೀಯ ಪಿಯುಸಿ ಮಾಡುತ್ತಿದ್ದು, ಎಂಬಿಬಿಎಸ್ ಮಾಡುವ ಆಸೆ ಇದೆ. ಆದರೆ, ಅಷ್ಟೊಂದು ಹಣ ಕೊಟ್ಟು ಓದುವ ಶಕ್ತಿಯಿಲ್ಲ. ಹಾಗಾಗಿ, ಏನು ಮಾಡಬಹುದು?

ಎಂಬಿಬಿಎಸ್ ಪ್ರವೇಶಕ್ಕೆ ಆಯೋಜಿಸುವ ನೀಟ್, ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆ. ಆದ್ದರಿಂದ, ನೀಟ್ ಪರೀಕ್ಷೆಯ ಮೂಲಕ ಸರ್ಕಾರಿ ಸೀಟ್ ಪಡೆಯುವುದೇ ನಿಮ್ಮ ಮೊದಲ ಗುರಿಯಾಗಿರಲಿ. ಕಳೆದ ವರ್ಷಗಳ ಮತ್ತು ಈ ವರ್ಷದ ಕಟ್ ಆಫ್ ಮಾಹಿತಿಯನ್ನು ಮಾಹಿತಿಯನ್ನು ಆದರಿಸಿ, ಸೂಕ್ತವಾದ ಕಾರ್ಯತಂತ್ರವನ್ನು ರಚಿಸಿ, ಏಕಾಗ್ರತೆ ಮತ್ತು ಪರಿಶ್ರಮದಿಂದ ಅನುಷ್ಠಾನಗೊಳಿಸಿ.

ಕೇಂದ್ರ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ವಿದ್ಯಾರ್ಥಿ ವೇತನಗಳು ಮತ್ತು ಸ್ಕಾಲರ್‌ಶಿಪ್ ಸೌಲಭ್ಯಗಳಿವೆ. ಹೆಚ್ಚಿನ ವಿವರಗಳಿಗಾಗಿ ಈ ಜಾಲತಾಣವನ್ನು ಗಮನಿಸಿ: https://scholarships.gov.in/ 

ಇದಲ್ಲದೆ, ಶೈಕ್ಷಣಿಕ ಸಾಲವನ್ನು ಆಕರ್ಷಕ ಬಡ್ಡಿ ದರ ಮತ್ತು ವಿದ್ಯಾರ್ಥಿ ಸ್ನೇಹಿ ನಿಯಮಗಳೊಂದಿಗೆ ದೇಶದಲ್ಲಿರುವ ಎಲ್ಲಾ ಬ್ಯಾಂಕ್‌ಗಳು ನೀಡುತ್ತವೆ. ಕೇಂದ್ರ ಹಣಕಾಸು ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಮಾರ್ಗದರ್ಶನದಲಿ,್ಲ ಈ ಸಾಲಗಳನ್ನು ಪಡೆಯಲು ವಿದ್ಯಾಲಕ್ಷಿ÷್ಮ ಜಾಲತಾಣವನ್ನು  ಅಭಿವೃದ್ಧಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗಮನಿಸಿ: https://www.vidyalakshmi.co.in/Students/

Q3: ಬಿ.ಎಸ್ಸಿ (ತೋಟಗಾರಿಕೆ) ನಂತರ  ವೃತ್ತಿಯ ಅವಕಾಶಗಳೇನು?

ಬಿ.ಎಸ್ಸಿ (ತೋಟಗಾರಿಕೆ) ಕೋರ್ಸಿನಲ್ಲಿ ಅನೇಕ ಉಪಯುಕ್ತ ಮತ್ತು ಕುತೂಹಲಕಾರಿ ವಿಷಯಗಳನ್ನು ಕಲಿಸಲಾಗುತ್ತದೆ. ಉದಾಹರಣೆಗೆ, ತೋಟಗಾರಿಕೆ, ಹೂವು, ಹಣ್ಣು ಮತ್ತು ತರಕಾರಿ ವಿಜ್ಞಾನ, ಪ್ಲಾಂಟೇಷನ್ ಬೆಳೆಗಳು, ತಳಿ ಶಾಸ್ತç, ಜೇನು ಕೃಷಿ, ಸಾವಯವ ಕೃಷಿ, ಸಸ್ಯ ರೋಗಶಾಸ್ತç, ತೋಟಗಾರಿಕಾ ವ್ಯವಹಾರ ನಿರ್ವಹಣೆ ಇತ್ಯಾದಿ ವಿಷಯಗಳಿರುತ್ತದೆ. ಆಸಕ್ತಿಯಿರುವ ವಿಷಯದಲ್ಲಿ, ಹೆಚ್ಚಿನ ತಜ್ಞತೆಗಾಗಿ ಎಂ.ಎಸ್ಸಿ/ಪಿ.ಎಚ್‌ಡಿ ಮಾಡಬಹುದು.

ಬಿ.ಎಸ್ಸಿ (ತೋಟಗಾರಿಕೆ) ಪದವಿಯ ನಂತರ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ವೃತ್ತಿಯನ್ನು ಅರಸಬಹುದು. ಉದಾಹರಣೆಗೆ, ತೋಟಗಾರಿಕೆ ಅಸಿಸ್ಟೆಂಟ್, ಫರ್ಸ್ಟ್ ಕ್ಲಾಸ್ ಅಸಿಸ್ಟೆಂಟ್, ಸಹಾಯಕ ತೋಟಗಾರಿಕೆ ಅಧಿಕಾರಿ, ಕೃಷಿ ಅಧಿಕಾರಿ, ತೋಟಗಾರಿಕೆ ಅಧಿಕಾರಿ ಸೇರಿದಂತೆ ಹಲವಾರು ಸರ್ಕಾರಿ ಹುದ್ದೆಗಳನ್ನು ಪಡೆಯಬಹುದು. ಖಾಸಗಿ ವಲಯದಲ್ಲಿ ನರ್ಸರಿ ಮ್ಯಾನೇಜರ್, ತೋಟಗಾರಿಕಾ ತಜ್ಞ, ತೋಟಗಾರಿಕಾ ವ್ಯವಸ್ಥಾಪಕ, ಲ್ಯಾಂಡ್‌ಸ್ಕೇಪ್ ಡಿಸೈನರ್, ಫಾರ್ಮ್ ಮ್ಯಾನೇಜರ್ ಮುಂತಾದ ವೃತ್ತಿಗಳನ್ನು ಅರಸಬಹುದು. ಇದಲ್ಲದೆ, ಈ ಕ್ಷೇತ್ರಕ್ಕೆ ಸಂಬAಧಿಸಿದ ಸ್ವಯಂ-ಉದ್ಯೋಗವನ್ನೂ ಮಾಡಬಹುದು. 

ಮುಖ್ಯವಾಗಿ, ಈ ಕ್ಷೇತ್ರದಲ್ಲಿ ಆಸಕ್ತಿ ಮತ್ತು ಸ್ವಾಭಾವಿಕ ಅಭಿರುಚಿಯಿದ್ದರೆ, ವೃತ್ತಿಯೋಜನೆಯನ್ನು ಮಾಡಿ  ಮುಂದುವರೆಯುವುದು ಸೂಕ್ತ. ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ

Q4: ನಾನೀಗ ಎಂಎ (ಕನ್ನಡ) ಮಾಡುತ್ತಿದ್ದು ಮುಂದೆ ಪಿ.ಎಚ್‌ಡಿ ಮಾಡಬೇಕು. ದಯವಿಟ್ಟು ಮಾರ್ಗದರ್ಶನ ನೀಡಿ.

ಸಾಮಾನ್ಯವಾಗಿ, ಪಿಎಚ್‌ಡಿ ಮಾಡಲು ಪ್ರಕ್ರಿಯೆ ಹೀಗಿರುತ್ತದೆ:

  • ಪಿಎಚ್‌ಡಿಗೆ ಅಗತ್ಯವಾದ  ಸಂಶೋಧನೆಯ ವಿಷಯವನ್ನು  ನಿರ್ಧರಿಸುವುದು ಸುಲಭವಲ್ಲ.  ವಿಷಯದ ಪ್ರಸ್ತುತತೆ, ವಿಷಯದ ಕುರಿತು ಸ್ವಾಭಾವಿಕವಾದ ಒಲವು ಮತ್ತು ಪ್ರೇರಣೆಯ ಜೊತೆಗೆ ಮಾರ್ಗದರ್ಶಕರ ಸಕಾರಾತ್ಮಕ ಅಭಿಪ್ರಾಯ ಮತ್ತು ಬೆಂಬಲವಿರಬೇಕು. ಹಾಗಾಗಿ, ವಿಷಯದ ಕುರಿತು ಪ್ರಾಥಮಿಕ ಸಂಶೋಧನೆ ಅಗತ್ಯ.
  • ಪಿಎಚ್‌ಡಿ ಕೋರ್ಸಿನಲ್ಲಿ ನೀವು ಮಾಡುವ ಸಂಶೋಧನೆ ಕುರಿತ ಸುದೀರ್ಘವಾದ ಪ್ರಸ್ತಾವನೆಯನ್ನು ತಯಾರಿಸಬೇಕು. ಇದರ ಆಧಾರದ ಮೇಲೆ ವಿಶ್ವವಿದ್ಯಾಲಯದ ಅನುಮತಿ ಸಿಗುತ್ತದೆ. 
  • ವಿಶ್ವವಿದ್ಯಾಲಯಗಳು ಪ್ರತಿ ವರ್ಷದ ಪಿಎಚ್‌ಡಿ ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಸಂಖ್ಯೆಯ ಅವಕಾಶಗಳನ್ನು ಹೊಂದಿರುತ್ತವೆ. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಗಳು, ಸಂದರ್ಶನಗಳು ಮತ್ತು ಸಂಶೋಧನಾ ಪ್ರಸ್ತಾವನೆಯ ಮೌಲ್ಯಮಾಪನ ಇತ್ಯಾದಿ ಪ್ರಕ್ರಿಯೆಗಳಿರುತ್ತದೆ.
  • ಪಿಎಚ್‌ಡಿ ಕೋರ್ಸಿಗೆ ಆಯ್ಕೆಯಾದ ನಂತರ ಸಂಶೋಧನೆಯನ್ನು ಪೂರ್ಣಗೊಳಿಸಿ ಮಹಾಪ್ರಬಂಧವನ್ನು (ಥೀಸಿಸ್) ಬರೆದು ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು. ಇದಲ್ಲದೆ, ವಿಶ್ವವಿದ್ಯಾಲಯದ ನಿಯಮಾವಳಿಗಳಂತೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಬೇಕು.
  • ನೀವು ಸಲ್ಲಿಸಿದ ಮಹಾಪ್ರಬಂಧವನ್ನು ವಿಷಯ ತಜ್ಞರ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ.
  • ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಸ್ವೀಕಾರ ಮಾಡಿದ ನಂತರ ಪಿಎಚ್‌ಡಿ ಪದವಿಯನ್ನು ನೀಡಲಾಗುತ್ತದೆ. ಈ ಪ್ರಕ್ರಿಯೆಗೆ ೩-೫ ವರ್ಷ ಬೇಕಾಗಬಹುದು. ಪ್ರತಿ ವಿಶ್ವವಿದ್ಯಾಲಯಕ್ಕೆ ಸಂಬAಧಿಸಿದAತೆ ನಿಯಮಾವಳಿಗಳು, ಶುಲ್ಕಗಳು, ವಿದ್ಯಾರ್ಥಿ ವೇತನ, ಅನುದಾನ ಇತ್ಯಾದಿಗಳು ವಿಭಿನ್ನವಾಗಿರುತ್ತದೆ. ಹೆಚ್ಚಿನ ಮಾರ್ಗದರ್ಶನಕ್ಕಾಗಿ  ವೀಕ್ಷಿಸಿ: https://www.youtube.com/watch?v=Mb4PKUb35_Q

Q5: ನಾನು ಬಿಕಾಂ ಮಾಡುತ್ತಿದ್ದು ಮುಂದೆ ಎಂಬಿಎ ಮಾಡಿದರೆ ಉದ್ಯೋಗಾವಕಾಶಗಳು ಹೇಗಿವೆ?

ಉದ್ಯಮಗಳ ಅಭಿವೃದ್ಧಿಗಾಗಿ, ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಉಪಯೋಗಿಸುವ ಯೋಜನೆಗಳನ್ನು ರಚಿಸಿ, ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವುದೇ ಮ್ಯಾನೇಜ್‌ಮೆಂಟ್‌ನ ಮೂಲ ಉದ್ದೇಶ. ಈ ಜವಾಬ್ದಾರಿಗಳನ್ನು ನಿರ್ವಹಿಸಲು, ಸಮಗ್ರವಾದ ಜ್ಞಾನ ಮತ್ತು ಕೌಶಲಗಳನ್ನು ಎಂಬಿಎ ಕೋರ್ಸಿನಲ್ಲಿ ನೀಡಲಾಗುತ್ತದೆ. ಇದಲ್ಲದೆ, ಉದ್ಯಮಗಳಲ್ಲಿ ಪ್ರಾಯೋಗಿಕವಾದ ತರಬೇತಿಯನ್ನು ಪ್ರಾಜೆಕ್ಟ್ಗಳ ಮುಖಾಂತರ ನೀಡುವುದರಿಂದ ಕಲಿಕೆ ಪರಿಪೂರ್ಣವಾಗುತ್ತದೆ. ನಿಮ್ಮ ನೈಪುಣ್ಯತೆ ಮತ್ತು ಚತುರತೆ ವರ್ಧಿಸಿ, ಯಾವುದೇ ಕೆಲಸವನ್ನು ನಿಭಾಯಿಸುವ ಆತ್ಮವಿಶ್ವಾಸ ಬೆಳೆಯುತ್ತದೆ. ಒಟ್ಟಾರೆ, ಎಂಬಿಎ ಕಲಿಕೆಯ ವೈವಿಧ್ಯತೆಗಳಿಂದ ನಿಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ, ಆಕರ್ಷಕವಾದ ಉದ್ಯೋಗಾವಕಾಶಗಳಿವೆ. ಹೆಚ್ಚಿನ ಮಾಹಿತಿಗಾಗಿ ವೀಕ್ಷಿಸಿ: https://www.youtube.com/watch?v=1TcHjPKJ1gw

Q6: ನಾನೀಗ ಅಂತಿಮ ವರ್ಷದ ಎಂಜಿನಿಯರಿAಗ್ ಓದುತ್ತಿದ್ದು, ಸರ್ಕಾರಿ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ತಿಳಿಸಿ.

ಎಂಜಿನಿಯರಿAಗ್ ಪದವೀಧರರಿಗೆ ಸರ್ಕಾರಿ ವಲಯದಲ್ಲಿ ಆಕರ್ಷಕ ಉದ್ಯೋಗಾವಕಾಶಗಳಿವೆ. ಮೂಲಸೌಕರ್ಯ ಅಭಿವೃದ್ಧಿ,  ಲೋಕೋಪಯೋಗಿ, ಇಂಧನ, ಮಾಹಿತಿ ತಂತ್ರಜ್ಞಾನ, ನೀರಾವರಿ, ಯೋಜನೆ, ಸಾರಿಗೆ, ನಗರಾಭಿವೃದ್ಧಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮುಂತಾದ ಇಲಾಖೆಗಳಲ್ಲಿ ಉದ್ಯೋಗವನ್ನು ಅರಸಬಹುದು. ಹಾಗೂ, ಯುಪಿಎಸ್‌ಸಿ, ಕೆಪಿಎಸ್‌ಸಿ, ರೈಲ್ವೇಸ್, ಬ್ಯಾಂಕಿAಗ್  ಕ್ಷೇತ್ರಗಳಲ್ಲಿಯೂ ಮತ್ತು ಇಸ್ರೋ, ಡಿಆರ್‌ಡಿಒ, ಬಿಎಆರ್‌ಸಿ, ಸಿಎಸ್‌ಐಆರ್ ಮುಂತಾದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಲ್ಲಿಯೂ ವೃತ್ತಿಯನ್ನು ಅರಸಬಹುದು.

ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ ಮತ್ತು ಕೌಶಲಗಳನ್ನು ಗಮನಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ

Q7: ಸರ್, ಪಿಯುಸಿ (ವಾಣಿಜ್ಯ) ನಂತರ ಯಾವ ಆಯ್ಕೆಯನ್ನು ಮಾಡಿದರೆ ಒಳ್ಳೆಯದು?

ಪಿಯುಸಿ (ವಾಣಿಜ್ಯ) ನಂತರ ಕೋರ್ಸ್ ಆಯ್ಕೆಗಳೆಂದರೆ ಸಿಎ (ಫೌಂಡೇಷನ್ ಕೋರ್ಸ್ ಮುಖಾಂತರ), ಬಿಕಾಂ (ಜನರಲ್, ಹಾನರ್ಸ್, ಬ್ಯಾಂಕಿಂಗ್, ಫೈನಾನ್ಸ್, ಟೂರಿಸಮ್, ಪ್ರೊಫೆಷನಲ್, ಇಂಟರ್‌ನ್ಯಾಷನಲ್ ಫೈನಾನ್ಸ್ ಇತ್ಯಾದಿ), ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯು, ಎಸಿಎಸ್, ಸಿಎಂಎ,  ಇಂಟಿಗ್ರೇಟೆಡ್ ಎಲ್‌ಎಲ್‌ಬಿ ಇತ್ಯಾದಿ. ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=jmijSoqBDVw